ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಠ್ಯಕ್ಕೆ ಆಯ್ಕೆಯಾದ ಪುತ್ತೂರಿನ ಅಮೀರ್ ಬನ್ನೂರು ಕವನ

ಮಂಗಳೂರು: ಪುತ್ತೂರಿನ ಯುವ ಭಾಷಣಗಾರ, ಕವಿ ಅಮೀರ್ ಬನ್ನೂರು ಅವರ ”ಕಣ್ಣೀರಿಗೆ ಊರು ತುಂಬದಿರಲಿ” ಎಂಬ ಕವನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿ.ಕಾಂ, ಬಿ.ಬಿ.ಎ, ಐ.ಎಂ.ಬಿ ನಾಲ್ಕನೇ ಸೆಮಿಸ್ಟರ್ ಕನ್ನಡ ಪಠ್ಯ ಪುಸ್ತಕದಲ್ಲಿ ಮುದ್ರಣಗೊಂಡಿದೆ.

ಕೆ.ಎ ಅಮೀರ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾಗಿದ್ದು, ಕೆ.ಎಚ್ ಅಬ್ದುಲ್ಲ ಮುಸ್ಲಿಯಾರ್ ತಾಯಿ ಖತೀಜ ದಂಪತಿ ಪುತ್ರನಾಗಿದ್ದಾರೆ. ಪ್ರೌಢ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಮುಗಿಸಿ. ಉನ್ನತ ವಿದ್ಯಾಭ್ಯಾಸವನ್ನು ಅರಬಿಕ್ ಭಾಷೆಯಲ್ಲಿ ಕೇರಳದ ಕಲ್ಲಿಕೋಟೆಯಲ್ಲಿರುವ ಸಿರಾಜುಲ್ ಹುದಾ ಕುಟ್ಯಾಡಿಯಲ್ಲಿ ಪ್ರಾರಂಭಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸುರಿಬೈರಿನ ದಾರುಲ್ ಅಶ್ ಅರಿಯ್ಯದಲ್ಲಿ ಅರಬಿಕ್ ಪದವಿಯನ್ನು ಪಡೆದಿದ್ದಾರೆ. ಸದ್ಯ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here