ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ- ದಿನೇಶ್‌ ಗುಂಡೂರಾವ್

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಲಿದೆ ಎಂದು ಮಂಗಳೂರಿನಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಧರ್ಮಸ್ಥಳದ ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಕೇಳಿಬರುತ್ತಿರುವ ಒತ್ತಾಯದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣದಲ್ಲಿ ಸಿಬಿಐ ವರದಿ ಕೊಟ್ಟಾಗಿದೆ.ಆದರೆ ಈಗ ಸಾಕಷ್ಟು ಜನ ಇದರ ಮರು ತನಿಖೆಗೆ ಒತ್ತಾಯಿಸ್ತಾ ಇದ್ದಾರೆ. ಇದು ಸರ್ಕಾರದ ಮಟ್ಟದಲ್ಲಿದ್ದು, ಸರ್ಕಾರ ಮಾಹಿತಿ ತರಿಸಿಕೊಳ್ತಾ ಇದೆ. ಸಿಎಂ ಮತ್ತು ಗೃಹ ಇಲಾಖೆ ಕೇಸ್ ಡಿಟೈಲ್ಸ್ ಬರಲಿ ಅಂತ ಹೇಳಿದ್ದಾರೆ.ಇದರ ತೀರ್ಮಾನ ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ ಎಂದು ಹೇಳಿದರು .

ನಾನು ಮರು ತನಿಖೆ ಮಾಡಿ ಅಥವಾ ಮಾಡಬೇಡಿ ಅಂತ ಹೇಳಲು ಹೋಗಲ್ಲ. ಇದರ ಆಧಾರಗಳ ಮಾಹಿತಿ ಬಂದ ನಂತರ ಗೃಹ ಸಚಿವರ ಜೊತೆ ಮಾತನಾಡ್ತೀನಿ. ಸರ್ಕಾರದ ಮಟ್ಟದಲ್ಲಿ ಮರು ತನಿಖೆ ಬಗ್ಗೆ ತೀರ್ಮಾನ ಆಗಲಿದೆ. ನಾನು ಕೂಡ ಈ ಬಗ್ಗೆ ಗೃಹ ಸಚಿವರ ಜೊತೆ ಮಾತನಾಡ್ತೇನೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

LEAVE A REPLY

Please enter your comment!
Please enter your name here