ಸುರತ್ಕಲ್‌ ಬಂಟರ ಸಂಘದ ವತಿಯಿಂದ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಬಂಟರ ಸಂಘ ಸುರತ್ಕಲ್ ಮತ್ತು ಬಂಟರ ಮಹಿಳಾ ವೇದಿಕೆ ಇದರ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಆ.13 ರಂದು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆಯಲ್ಲಿ ನಡೆಯಿತು.

ಸುರತ್ಕಲ್‌ ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ತುಳು ಸ್ನಾತಕೋತ್ತರ ಅಧಯಯನ ವಿಭಾಗದ ಉಪನ್ಯಾಸಕಿ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಅಶೋಕ್ ರೈ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎ ಸದಾನಂದ ಶೆಟ್ಟಿ, ಶಾಸಕ ಡಾ.ವೈ ಭರತ್‌ ಶೆಟ್ಟಿ, ಶಾಸಕ ಉಮಾನಾಥ್‌ ಎ ಕೊಟ್ಯಾನ್‌, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸುರತ್ಕಲ್‌ ಬಂಟರ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯ ಎ ಶೆಟ್ಟಿ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here