ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಮಂಗಳೂರು: ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಬಳ್ಳಮಂಜ ನಿವಾಸಿಗಳಾದ ತನಿಯ ಮತ್ತು ಚೋಮೋ ದಂಪತಿ ಪುತ್ರ ರಾಜೇಶ್(27) ಮೃತ ಯುವಕ.

ರಾಜೇಶ್ ಕಳೆದ ಶುಕ್ರವಾರ ಸಂಜೆ ಮನೆಯಿಂದ ತೆರಳಿದ್ದು, ಮತ್ತೆ ವಾಪಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪುಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ಪತ್ತೆಯಾಗಿತ್ತು. ನಿನ್ನೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಸ್ಥಳೀಯ ಮೀನುಗಾರರಾದ ಪ್ರೇಮ ಪ್ರಕಾಶ್ ಡಿಸೋಜಾ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು ರಾಜೇಶ್ ಪೋಷಕರು ಶವದ ಗುರುತು ಪತ್ತೆಹಚ್ಚಿದ್ದಾರೆ.

LEAVE A REPLY

Please enter your comment!
Please enter your name here