ಮಡಿಕೇರಿ: ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್‌ – ನೆಲಕ್ಕುರುಳಿದ ಪ್ರತಿಮೆ

ಮಂಗಳೂರು: ಜನರಲ್ ತಿಮ್ಮಯ್ಯ ಪ್ರತಿಮೆಗೆ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪ್ರತಿಮೆ ನೆಲಕ್ಕುರುಳಿದ ಘಟನೆ ಮಡಿಕೇರಿ ಪಟ್ಟಣದಲ್ಲಿ ನಡೆದಿದೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತದಲ್ಲಿರುವ ವೀರ ಸೇನಾನಿಯ ಪ್ರತಿಮೆಗೆ ನಿಯಂತ್ರಣ ತಪ್ಪಿದ ಬಸ್ಸೊಂದು ಡಿಕ್ಕಿಯಾಗಿದೆ. ಪರಿಣಾಮ ಪ್ರತಿಮೆಯು ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪ್ಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಕೆಎಸ್‌ ಆರ್‌ ಟಿಸಿ ಬಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಪ್ರತಿಮೆಗೆ ಡಿಕ್ಕಿಯಾಗಿದೆ. ಅಪಘಾತ ಸಂದರ್ಭ ಸರ್ಕಲ್ ಬಳಿ ಇದ್ದ ವ್ಯಕ್ತಿಯೊಬ್ಬರು ಪವಾಡ ಸದೃಶ್ಯ ಪಾರದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯ ವೈರಲ್ ಆಗಿದೆ. ಅಪಘಾತದಿಂದ ಚಾಲಕ, ನಿರ್ವಾಹಕ ಪುಟ್ಟಗಾಯಗಳಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here