ಮಂಗಳೂರು : ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ-24 ಗಂಟೆಯೊಳಗಡೆ ಆರೋಪಿಗಳು ವಶಕ್ಕೆ

ಮಂಗಳೂರು: ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣ ಆ.20ರಂದು ಕಾವೂರಿನಲ್ಲಿ ನಡೆದಿದ್ದು, ಕೃತ್ಯ ನಡೆದ 24 ಗಂಟೆಯೊಳಗಡೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ತಲವಾರು ಹಾಗೂ ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳ ತಂಡ ಅನ್ಯ ಕೋಮಿನ ವಕ್ತಿಯನ್ನು ಅಡ್ಡ ಹಾಕಿ ತಲವಾರು ಬೀಸಿದ್ದರು. ಈ ವೇಳೆ ಆ ವ್ಯಕ್ತಿ ತಲವಾರು ದಾಳಿಯಿಂದ ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿತ್ತು. ಈ ಕುರಿತು ದಾಳಿಗೊಳಗಾದ ವ್ಯಕ್ತಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಆಯುಧ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here