ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿತ – 17 ಮಂದಿ ಮೃತ್ಯು

ಮಂಗಳೂರು(ಹೊಸದಿಲ್ಲಿ): ಮಿಝೋರಾಂನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐಝಾಲ್ ನಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಿಂದ ಈ ಘಟನೆ ನಡೆದಿದೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here