ಬುದ್ದಿವಾದ ಹೇಳಿದ ಶಿಕ್ಷಕನಿಗೆ ಬೆದರಿಕೆ‌ – ಮಾರಕಾಸ್ತ್ರ ಹಿಡಿದು ಬೆದರಿಕೆಯೊಡ್ಡಿದ ವಿದ್ಯಾರ್ಥಿ

ಮಂಗಳೂರು(ಮಂಡ್ಯ): ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿರುವ ಪ್ರಕರಣ ಮಂಡ್ಯದ ನಾಗಮಂಗಲದಲ್ಲಿ ವರದಿಯಾಗಿದೆ. ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ಅಷ್ಟಕ್ಕೆ ಕೋಪಗೊಂಡ ವಿದ್ಯಾರ್ಥಿ ಮಾರಕಾಸ್ತ್ರ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯನ್ನು ಮಾರಕಾಸ್ತ್ರ ಸಹಿತ ವಶಪಡಿಸಿಕೊಂಡ ಪೊಲೀಸರು, ಬಳಿಕ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.ʼ

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here