ಬಜ್ಪೆ ಕಳವಾರು ಎಂಬಲ್ಲಿ ಯುವಕನಿಗೆ ಚೂರಿ ಇರಿತ – ಮೂವರ ಬಂಧನ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಕಳವಾರು ಶಾಂತಿಗುಡ್ಡೆ ನಿವಾಸಿ  ಸಫ್ವಾನ್‌ (23) ಕಳೆದ ರಾತ್ರಿ ಚೂರಿ ಇರಿತಕ್ಕೊಳಗಾಗಿದ್ದಾರೆ. ತಕ್ಷಣ ಸಫ್ವಾನ್‌ ಗೆ ಬಜ್ಪೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ್‌ ಅಲಿಯಾಸ್‌ ಪಚ್ಚು(28), ಧನರಾಜ್‌ (23), ಯಜ್ಞೇಶ್‌ (22) ಎಂದು ಗುರುತಿಸಲಾಗಿದೆ.

ಗಾಯಾಳು ಸಫ್ವಾನ್‌ ಅವರ ಕತ್ತು ಕೈ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here