ಕು.ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗೆ ಮನವಿ ಮಾಡಿದ ಬಿಜೆಪಿ ನಿಯೋಗ

ಮಂಗಳೂರು(ಬೆಂಗಳೂರು): ಬೆಳ್ತಂಗಡಿ ತಾಲ್ಲೂಕಿನ ಕು.ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಯವರಿಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿದ್ದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವ ವಿ. ಸುನೀಲ್ ಕುಮಾರ್, ಶಾಸಕರಾದ ಕು.ಭಾಗೀರಥಿ ಮುರಳ್ಯ, ವೇದವ್ಯಾಸ್ ಕಾಮತ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here