ಶೀಘ್ರದಲ್ಲಿಯೇ ವಿರೋಧ ಪಕ್ಷದ ನಾಯಕನ ಆಯ್ಕೆ – ಯಡಿಯೂರಪ್ಪ

ಮಂಗಳೂರು: ಪಕ್ಷದ ವರಿಷ್ಟರು ಶೀಘ್ರದಲ್ಲಿಯೇ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸೆ.7ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಮೂರು ನಾಲ್ಕು ದಿನದಲ್ಲಿ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ವಿರೋಧ ಪಕ್ಷದ ನಾಯಕನಿಲ್ಲದ ಕಾರಣಕ್ಕೆ ವಿಪಕ್ಷದ ಕೆಲಸಗಳು ನಿಂತಿಲ್ಲ. ರಾಜ್ಯ ಪ್ರವಾಸ ಮಾಡಿ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೇಣುಕಾಚಾರ್ಯ ಅವರನ್ನು ಕರೆದು ಮಾತನಾಡಿದ್ದೇನೆ ನಾವೆಲ್ಲರೂ ಒಟ್ಟಾಗಿ ಪಕ್ಷ ಕಟ್ಟಿ ಬೆಳೆಸಬೇಕಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here