ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕರಾವಳಿ ಪ್ರವಾಸ

ಮಂಗಳೂರು: ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ಸೆ.8ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಸೆ.8 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಜ್ಯಪಾಲರು 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಾಸ್ತವ್ಯ ಹೂಡುವ ರಾಜ್ಯಪಾಲರು 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತಾಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

LEAVE A REPLY

Please enter your comment!
Please enter your name here