ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪಿಐಎಲ್-ಹೈಕೋರ್ಟ್‌ ನಲ್ಲಿ ಇಂದು ಅರ್ಜಿ ವಿಚಾರಣೆ

ಮಂಗಳೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಉಜಿರೆ ಎಸ್‌ ಡಿ ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಗಿರೀಶ್‌ ಭಾರದ್ವಾಜ್‌, ಬೆಳ್ತಂಗಡಿ ನೆರಿಯದ ನವೀನ್‌ ಕುಮಾರ್‌ ಮತ್ತು ಪುತ್ತೂರು ಬಲ್ನಾಡಿನ ವಿನಾಯಕ ಫ್ರೆಂಡ್ಸ್‌ ಟ್ರಸ್ಟ್‌ ಒಟ್ಟಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು(ಸೆ.8) ರಾಜ್ಯ ಉಚ್ಚನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ ಮಂಡಿಸಲಿದ್ದಾರೆ.

LEAVE A REPLY

Please enter your comment!
Please enter your name here