ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರ ಸಾವು

ಮಂಗಳೂರು (ತುಮಕೂರು): ಗೊರವನಹಳ್ಳಿ ದೇವರ ದರ್ಶನಕ್ಕೆಂದು ಬಂದಿದ್ದ ಮಹಿಳೆಯರಿಬ್ಬರು ಎರಡು ಬಸ್ ಗಳ ನಡುವೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ಮಹಿಳೆಯರನ್ನು ಶ್ರೀರಂಗಪಟ್ಟಣದ ಕೆ. ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ(60) ಮತ್ತು ಪಂಕಜ(50) ಎಂದು ಗುರುತಿಸಲಾಗಿದೆ.

ಏಳು ಮಹಿಳೆಯರು ಒಟ್ಟಾಗಿ ಮಂಡ್ಯದಿಂದ ಉಚಿತ ಬಸ್ ಮೂಲಕ ತುಮಕೂರಿಗೆ ಬಂದಿದ್ದರು. ಅಲ್ಲಿಂದ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗುವ ಬಸ್ ಹತ್ತುತ್ತಿದ್ದ ವೇಳೆ ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ರಿವರ್ಸ್ ಬಂದಿದೆ. ಎರಡು ಬಸ್ ಗಳ ನಡುವೆ ಸಿಲುಕಿದ ಇಬ್ಬರು ಮಹಿಳೆಯರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here