ಒವರ್ ಟೇಕ್ ಭರಾಟೆ -ಗದ್ದೆಗೆ ಉರುಳಿ ಬಿದ್ದು ಪಲ್ಟಿಯಾದ ಕಾರುಗಳು – ಓರ್ವನಿಗೆ ಗಾಯ

ಮಂಗಳೂರು(ಪಡುಬಿದ್ರಿ): ಒವರ್ ಟೇಕ್ ಮಾಡುವ ಭರಾಟೆಯಲ್ಲಿ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಪಕ್ಕದ ಗದ್ದೆಗೆ ಉರುಳಿ ಬಿದ್ದ ಘಟನೆ ಪಡುಬಿದ್ರಿಯ ಅಲಂಗಾರು ಸಮೀಪ ನಡೆದಿದೆ.

ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದ್ದು, ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಘಟನಾ ಸ್ಥಳದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು ಹೊಂದಿದ್ದು, ಚತುಷ್ಪಥ ರಸ್ತೆ ಕಾಮಗಾರಿ ಸಂದರ್ಭದಲ್ಲೂ ಹೆದ್ದಾರಿ ನೇರಗೊಳಿಸುವ ಪ್ರಕ್ರಿಯೆ ನಡೆಸದ ಕಾರಣ ಈಗಲೂ ಈ ತಿರುವು ಬಹಳಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಭಾಗದಲ್ಲಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಪಕ್ಕದ ಗದ್ದೆಗೆ ಉರುಳುತ್ತಿದ್ದರೂ ಹೆದ್ದಾರಿ ಇಲಾಖೆ ತನಗೆ ಸಂಬಂಧವೇ ಇಲ್ಲದಂತೆ ಮೌನ ವಹಿಸಿದೆ ಎಂಬುವುದು ಸಾರ್ವಜನಿಕರ ಆರೋಪ. ಹೆಜಮಾಡಿ ಟೋಲ್ ಸಿಬ್ಬಂದಿಗಳು ವಾಹನಗಳನ್ನು ತೆರವುಗೊಳಿಸಿದ್ದು, ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸಿ ವಾಹನಗಳನ್ನು ಠಾಣೆಗೆ ಸಾಗಿಸಿದ್ದಾರೆ.

 

LEAVE A REPLY

Please enter your comment!
Please enter your name here