ಚೈತ್ರಾ ಡೀಲ್ ಪ್ರಕರಣ – ಹಾಲಶ್ರೀ ಸ್ವಾಮೀಜಿ ವಿರುದ್ದ ಮತ್ತೊಂದು ವಂಚನೆ ಆರೋಪ

ಮಂಗಳೂರು(ಬೆಂಗಳೂರು): ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಹೇಳಿ ವಂಚಿಸಿ, ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ಚೈತ್ರಾ ಕುಂದಾಪುರ ಗ್ಯಾಂಗಿನ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೇಳಿ ಬಂದಿದೆ. ಶಿರಹಟ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ ಚವಡಾಳ ಎಂಬುವರಿಗೆ, ಹಾಲಶ್ರೀ ಸ್ವಾಮೀಜಿ ಬಿಜೆಪಿ ಟಿಕೇಟ್ ಕೊಡಿಸುವದಾಗಿ ಹೇಳಿ ಒಂದು ಕೋಟಿ ರೂಪಾಯಿ ವಂಚನೆ ಮಾಡಿರುವ ಬಗ್ಗೆ ಮುಂಡರಗಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತಿಯ ಪಿಡಿಓ ಆಗಿದ್ದ ಸಂಜಯ ಕರ್ತವ್ಯ ನಿರ್ಲಕ್ಷದ ಆರೋಪದ ಮೇಲೆ ಅಮಾನತ್ತು ಗೊಂಡಿದ್ದರು. ಬಿಜೆಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸಂಜಯ ಆರ್ ಎಸ್ ಎಸ್ ಬೈಠಕ್ ನಲ್ಲಿಯೂ ಕಾಣಿಸಿಕೊಂಡಿದ್ದರು. ಮೂರು ಹಂತಗಳಲ್ಲಿ ನನ್ನಿಂದ ಒಂದು ಕೋಟಿ ಪಡೆದು ಹಾಲಶ್ರೀ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಮುಂಡರಗಿ ಠಾಣೆ ಪೊಲೀಸರು ಹಣ ಕೊಟ್ಟಿರುವ ಬಗ್ಗೆ ದಾಖಲೆ ಸಲ್ಲಿಸುವಂತೆ ತಿಳಿಸಿದ್ದು, ಇದುವರೆಗೂ ಸಂಜಯ್ ದಾಖಲೆ ನೀಡಿಲ್ಲ.

LEAVE A REPLY

Please enter your comment!
Please enter your name here