ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ತಪ್ಪಿದ ಅನಾಹುತ

ಮಂಗಳೂರು (ಚಿಕ್ಕಮಗಳೂರು): ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಘಟನೆ ಇಂದು ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಬೆಂಕಿ‌ ಕಂಡ ತಕ್ಷಣ ಕಾರನಿಂದ ಇಳಿದು ಪಾರಾಗಿದ್ದಾರೆನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಬೆಂಕಿಯ ತೀವ್ರತೆಯಿಂದ ಕಾರು‌ ಸಂಪೂರ್ಣ ಸುಟ್ಟು ಕರಕಲಾಗಿದೆ.

LEAVE A REPLY

Please enter your comment!
Please enter your name here