ಮಾರ್ಬಲ್ ತುಂಬಿದ ಲಾರಿ ಪಲ್ಟಿ: ನಾಲ್ವರ ಪೈಕಿ ಇಬ್ಬರು ಗಂಭೀರ

ಮಂಗಳೂರು(ವಿಟ್ಲ): ಒಡಿಯೂರು ಶಾಲೆಗೆ ಮಾರ್ಬಲ್‌ ತುಂಬಿಕೊಂಡು ಬಂದ ಲಾರಿಯೊಂದು ಪಲ್ಟಿಯಾಗಿ ನಾಲ್ಕು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.

ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಕಾರ್ಮಿಕರ ಕೈಕಾಲುಗಳಿಗೆ ತೀವ್ರ ತರದ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ನಾಲ್ಕು ಅಂಬ್ಯುಲೆನ್ಸ್‌ ಗಳ ಮೂಲಕ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರು ಕಾರ್ಮಿಕರು ಉತ್ತರ ಭಾರತ ಮೂಲದವರು ಎಂದು ಗುರುತಿಸಲಾಗಿದ್ದು, ಈ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮಾರ್ಬಲ್‌ ಅನ್‌ ಲೋಡು ಮಾಡುವುದಕ್ಕಾಗಿ ಲಾರಿಯನ್ನು ಹಿಂದಕ್ಕೆ ತೆಗೆಯುವ ವೇಳೆ ಬ್ರೇಕ್‌ ಫೈಲ್‌ ಆಗಿ ಲಾರಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅಪ್‌ ಡೇಟ್:‌ ಗಾಯಾಳುಗಳ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here