ಶೃಂಗೇರಿ ಶಾರದಾ ಪೀಠಕ್ಕೆ ಮೋಹನ್ ಭಾಗವತ್ ಭೇಟಿ – ಶ್ರೀಗಳೊಂದಿಗೆ ಮಾತುಕತೆ

ಮಂಗಳೂರು(ಚಿಕ್ಕಮಗಳೂರು): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್  ಶೃಂಗೇರಿ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆದರು.

ಅ.5 ಗುರುವಾರದಂದು ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಾರತೀತೀರ್ಥ ಶ್ರೀಗಳು ಹಾಗೂ ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಭಾಗವತ್ ಅವರ ಜತೆ ಐವರು ಸದಸ್ಯರು ಕ್ಷೇತ್ರಕ್ಕೆ ಭೇಟಿ ನೀಡಿದ್ದು ಮಾತುಕತೆ ವಿವರ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here