ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬಿರುಕು – ಸಂಚಾರಕ್ಕೆ ಸಂಚಕಾರ

ಮಂಗಳೂರು: ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಬ್ರಿಟಿಷರ ಕಾಲದ ಸೇತುವೆಯಲ್ಲಿ ಬಿರುಕು ಕಂಡುಬಂದಿದೆ. ಅ.8ರಂದು ರಾತ್ರಿ ಇದನ್ನು ಕಂಡ ಸ್ಥಳೀಯರು ಕೂಡಲೇ ಇಲಾಖೆಗೆ ಮಾಹಿತಿ ನೀಡಿದ್ದು, ಕಂದಾಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸೇತುವೆಯ ಮೇಲಿನ ರಸ್ತೆಯಲ್ಲಿ ಬಿರುಕು ಕಂಡುಬಂದಿದ್ದು, ಇದು ಸೇತುವೆಯ ಬಿರುಕೇ ಅಥವಾ ರಸ್ತೆಯ ಮೇಲಿನ ಥಾರು ಹಾಕಿದ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಪರಿಶೀಲನೆ ಬಳಿಕ ಗೊತ್ತಾಗಬೇಕಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯಲ್ಲಿ ಈ ಹಿಂದೆಯೇ ಬಿರುಕು ಕಾಣಿಸಿಕೊಂಡಿತ್ತು. ಬಳಿಕ ಘನ ವಾಹನಗಳ ಸಂಚಾರ ಅಪಾಯಕಾರಿ ಎಂಬ ವರದಿ ನೀಡಲಾಗಿತ್ತು. ಆದರೆ ಕಾಲಕ್ರಮೇಣ ಘನ ವಾಹನಗಳ ಸಂಚಾರ ಮುಂದುವರಿದಿತ್ತು. ಇದೀಗ ಮತ್ತೆ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸ್ಥಳೀಯ ರಸ್ತೆ ಬಳಕೆದಾರರ ಆತಂಕಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here