ಬೋನ್‌ ಇರಿಸಿದ್ದು ಚಿರತೆ ಸೆರೆ ಹಿಡಿಯಲು – ಬೋನಿಗೆ ಬಿದ್ದದು ಸ್ಥಳೀಯ ಶ್ವಾನ

ಮಂಗಳೂರು(ಕೊಣಾಜೆ): ಕೊಣಾಜೆ ಸಮೀಪದ ನಡುಪದವು ಬಳಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ನಾಯಿಯೊಂದು ಬಿದ್ದು ಲಾಕ್ ಆಗಿರುವ ಘಟನೆ ಇಂದು ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ನಡುಪದವಿನ ಮನೆಗಳಿರುವ ಪರಿಸರದ ಬಳಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಅರಣ್ಯ ಇಲಾಖೆಯವರು ಪರಿಸರದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇರಿಸಿದ್ದರು. ಆದರೆ ರವಿವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೋಗಿ ನೋಡಿದಾಗ ಗೂಡಿಗೆ ನಾಯಿಯೊಂದು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ನಾಯಿಯನ್ನು ಬೋನಿನಿಂದ ಹೊರಗೆ ಬಿಟ್ಟಿದ್ದಾರೆ.

 

LEAVE A REPLY

Please enter your comment!
Please enter your name here