ಲೋಕೋಪಯೋಗಿ ಇಲಾಖೆಯಲ್ಲಿ 500 ಕೋಟಿ ರೂ. ಹಗರಣ – ತನಿಖೆಗೆ ಆದೇಶ – ಮಾಜಿ ಸಚಿವರಿಗೆ ಸಂಕಷ್ಟ

ಮಂಗಳೂರು: ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ.

ಮಾಜಿ ಸಚಿವ ಬಿ ಆರ್ ಯಾವಗಲ್ ನೀಡಿದ್ದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರವು, ಪಿಡಬ್ಲ್ಯೂಡಿಯ ಗುಣ ಭರವಸೆ ವಲಯದ ಬೆಂಗಳೂರಿನ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಇದರಿಂದಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಸಿಸಿ ಪಾಟೀಲ್​ಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಳವಾಗಿದೆ.

LEAVE A REPLY

Please enter your comment!
Please enter your name here