ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಕಳವಳಕಾರಿ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್

ಮಂಗಳೂರು: ಮಾನವ ಧರ್ಮಕ್ಕೆ ಯುದ್ಧ ಯಾವತ್ತೂ ಪರಿಹಾರವಲ್ಲ. ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಕಳವಳಕಾರಿ ವಿಷಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರಾವಳಿ ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗಕ್ಕಾಗಿ ಇಸ್ರೇಲ್‌ ಗೆ ಹೋದವರಿದ್ದಾರೆ. ಈ ಪೈಕಿ ಹಲವಾರು ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ. ಇನ್ನುಳಿದಂತೆ ಕರಾವಳಿ ಜಿಲ್ಲೆಯವರು ಇಸ್ರೇಲ್‌ನಲ್ಲಿರುವ ತಮ್ಮ ಸಂಬಂಧಿಕರ ಮಾಹಿತಿ ನೀಡುವಂತೆ ಕರೆ ನೀಡಿದ ಅವರು ಇಸ್ರೇಲ್‌ನಲ್ಲಿರುವ ನಮ್ಮೂರಿನ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ನಮಗಿದೆ. ಇಸ್ರೇಲ್‌ನಲ್ಲಿರುವ ಮತ್ತು ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಹೇಳಿದ್ದಾರೆ. ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here