ಏಕಾಏಕಿ ಬ್ರೇಕ್‌ ಹಾಕಿದ ಲಾರಿಯ ಹಿಂಬದಿಗೆ ಸ್ಕೂಟರ್ ಡಿಕ್ಕಿ – ‌ಸ್ಥಳದಲ್ಲೇ ಮೃತಪಟ್ಟ ಸ್ಕೂಟರ್ ಸವಾರ 

ಮಂಗಳೂರು(ಉಳ್ಳಾಲ): ಮೀನುಗಾರಿಕೆಗೆ ತೆರಳುತ್ತಿದ್ದ ಲಾರಿಯೊಂದು ಏಕಾಏಕಿ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಡೆದಿದೆ.

ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ. ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲು ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

LEAVE A REPLY

Please enter your comment!
Please enter your name here