ಮಹಿಷ ದಸರಾದಲ್ಲಿ ಒಕ್ಕಲಿಗರ ಅವಹೇಳನೆ – ಒಕ್ಕಲಿಗ ಸಂಘದ ಸದಸ್ಯರಿಂದ ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ 

ಮಂಗಳೂರು(ಮೈಸೂರು): ಮಹಿಷ ದಸರಾ ಕಾರ್ಯಕ್ರಮದಲ್ಲಿ ಸಾಹಿತಿ, ವಿಚಾರವಾದಿ ಕೆ ಎಸ್ ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದಾರೆಂದು ತಮ್ಮ ಭಾಷಣದಲ್ಲಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಒಕ್ಕಲಿಗ ಸಂಘದ ಸದಸ್ಯರು ಅ.14ರಂದು ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ನಡೆಸಿದರು. ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

 

 

 

 

LEAVE A REPLY

Please enter your comment!
Please enter your name here