ಕುಕ್ಕರ್ ಬಾಂಬ್ ಪ್ರಕರಣ – ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್- ಎನ್​ಐಎ ತನಿಖೆಯಲ್ಲಿ ಬಯಲು

ಮಂಗಳೂರು(ಬೆಂಗಳೂರು): ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದು ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಿದ್ದೆವು ಎಂದು ಹೇಳಿದ್ದಾನೆ.

ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ ಈತ ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ. ಕದ್ರಿ ಬ್ಲಾಸ್ಟ್ ಸಕ್ಸಸ್ ಆದರೆ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್​ ಮಾಡುತ್ತಿದ್ದೆವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿ ಪ್ಲಾನ್‌ ಪ್ಲಾಪ್‌ ಆಗಿತ್ತು ಎಂದು ಹೇಳಿರುವುದು ಎನ್‌ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here