ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಎನ್.ಎಂ.ಪಿ.ಎ. ಭದ್ರತಾ ಸಿಬ್ಬಂದಿ ಝಾಕಿರ್‌ ಹುಸೈನ್ ಆತ್ಮಹತ್ಯೆ

ಮಂಗಳೂರು(ಸುರತ್ಕಲ್): ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯದ್ವಾರದ ಬಳಿ ಅ.22ರಂದು ಮುಂಜಾನೆ ನಡೆದಿದೆ.

ಮೃತರನ್ನು ರಾಯಚೂರು ನಿವಾಸಿ, ಸಿಐಎಸ್‌ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದೆ. ನವ ಮಂಗಳೂರು ಬಂದರ್ ನ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ ನಿರ್ವಹಿಸಿದ್ದ ಝಾಕಿರ್ ಬೆಳಗ್ಗೆ 6:30ರ ಸುಮಾರಿಗೆ ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here