ಕಡಕೋಳ ಟೋಲ್ ಪ್ಲಾಜಾ ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು – ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು (ಮೈಸೂರು): ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ಬಿಎಂಡಬ್ಲ್ಯು ಕಾರು ಹೊತ್ತಿ ಉರಿದ ಘಟನೆ ನಡೆದಿದೆ.

ಬಿಎಂಡಬ್ಲ್ಯು ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮೈಸೂರಿನ ಕುಟುಂಬವೊಂದು ನಂಜನಗೂಡಿನಿಂದ ವಾಪಸ್ಸಾಗುತ್ತಿದ್ದ ವೇಳೆ ಅ.22ರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

LEAVE A REPLY

Please enter your comment!
Please enter your name here