ಸೆಲ್ಫಿ ಧಾವಂತ-ದುರಂತದಲ್ಲಿ ಅಂತ್ಯ – ನದಿಗೆ ಬಿದ್ದು ಒಂದೇ ಕುಟುಂಬದ ಐವರ ಬದುಕು ಸಾವಿನಲ್ಲಿ ಅಂತ್ಯ

ಮಂಗಳೂರು(ರಾಂಚಿ): ಕಾರು ಚಾಲನೆ ವೇಳೆ ಚಾಲಕ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಕಾರೊಂದು ಸೇತುವೆಯಿಂದ ನದಿಗೆ ಬಿದ್ದು ಒಂದೇ ಕುಟುಂಬದ ಐದು ಮಂದಿ  ಸಾವಿಗೀಡಾಗಿದ್ದಾರೆ.

ಈ ಘಟನೆ ಜಾರ್ಖಂಡ್​ ರಾಜ್ಯದ ದಿಯೋಘರ್​ನ​ ಸಿಕಾತಿಯಾ​ ಬ್ಯಾರೆಜ್​ನಲ್ಲಿರುವ ಸೇತುವೆಯಲ್ಲಿ ನಡೆದಿದೆ. ಅಪಘಾತ ಸಂಬಂಧ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರ ನೆರವಿನಿಂದ ಕಾರನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಿಯೋಘರ್​ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

LEAVE A REPLY

Please enter your comment!
Please enter your name here