ಕಾಂಗ್ರೆಸ್‌ ನ 4 ಶಾಸಕರಿಗೆ ಬಿಜೆಪಿ ಗಾಳ – ಬಿಎಸ್‌ ವೈ ಆಪ್ತನಿಂದ 50 ಕೋಟಿ, ಮಂತ್ರಿ ಸ್ಥಾನದ ಆಮಿಷ – ಶಾಸಕ ರವಿ ಗಾಣಿಗ ಗಂಭೀರ ಆರೋಪ-ಶ್ರೀಘದಲ್ಲೇ ವೀಡಿಯೋ ಬಿಡುಗಡೆ

ಮಂಗಳೂರು(ಬೆಂಗಳೂರು): ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ಉರುಳಿಸಿದ ಆ ತಂಡ ಮತ್ತೆ ಕೆಲಸ ಆರಂಭಿಸಿದ್ದು, ಕಾಂಗ್ರೆಸ್‌ ನ 4 ಶಾಸಕರಿಗೆ 50 ಕೋಟಿ ರೂ. ಹಣದ ಜೊತೆಗೆ ಮಂತ್ರಿ ಸ್ಥಾನದ ಆಮಿಷ ಒಡ್ಡುತ್ತಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಾಣಿಗ ಆರೋಪಿಸಿದ್ದಾರೆ.

ದಾವಣೆಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಬಿ.ಎಸ್.​ ಯಡಿಯೂರಪ್ಪ ಅವರ ಪಿಎ ಆಗಿದ್ದ ಸಂತೋಷ್ ಹೋಟೆಲ್​ ಒಂದರಲ್ಲಿ ನಮ್ಮ ಶಾಸಕರನ್ನು ಭೇಟಿಯಾಗಿದ್ದಾನೆ. ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕರ‌‌ ಮನೆಗೆ ಹೋಗಿ, ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ. 50 ಕೋಟಿ ರೂಪಾಯಿಯ ಜೊತೆಗೆ ಮಂತ್ರಿ ಸ್ಥಾನವನ್ನೂ ಕೊಡುತ್ತೇವೆ ಎಂದು ಅಮಿಷ ಒಡ್ಡುತ್ತಿದ್ದಾರೆ. ಯಾರ‍್ಯಾರು ಓಡಾಡುತ್ತಿದ್ದಾರೋ ಅವರ ವಿಡಿಯೋ ನಮ್ಮ ಬಳಿ ಇದೆ. ಕೆಲವೇ ದಿನಗಳಲ್ಲಿ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ʼಹಳೆಯ ಶಾಸಕರನ್ನು ಮತ್ತು ಹೊಸ ಶಾಸಕರನ್ನು ಕೂಡ ಭೇಟಿಯಾಗಿದ್ದಾರೆ. ಆದರೆ, ಅವರ ಆಮಿಷಕ್ಕೆ ನಮ್ಮ ಯಾವುದೇ ಶಾಸಕರು ಬಲಿಯಾಗಿಲ್ಲ. ಈ ಬಗ್ಗೆ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಈಗಾಗಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿಯವರ ಗಮನಕ್ಕೂ ತಂದಿದ್ದೇವೆ ಎಂದರು. ಇನ್ನು ಯಾವ ಶಾಸಕರನ್ನು ಭೇಟಿಯಾಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ಕಾಲ, ಘಳಿಗೆ ಬೇಕಲ್ವಾ? ಯಾರ‍್ಯಾರನ್ನು ಭೇಟಿಯಾಗಿದ್ದಾರೆ, ಯಾರ‍್ಯಾರು ಓಡಾಡುತ್ತಿದ್ದಾರೆ ಎಂಬ ಬಗ್ಗೆ ಶೀಘ್ರದಲ್ಲೇ ವೀಡಿಯೊ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here