ಹುಲಿ ಉಗುರು ಪ್ರಕರಣ – ಅರಣ್ಯಾಧಿಕಾರಿ ದರ್ಶನ್ ಅಮಾನತು

ಮಂಗಳೂರು(ಚಿಕ್ಕಮಗಳೂರು): ಕಳಸದ ಅರಣ್ಯಾಧಿಕಾರಿಯೊಬ್ಬರು ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದಾರೆ. ಕಳಸದ ಡಿಆರ್‌‌ಎಫ್‍ಓ ದರ್ಶನ್ ಅಮಾನತುಗೊಂಡ ಅಧಿಕಾರಿಯಿದ್ದಾರೆ.

ದರ್ಶನ್ ಅವರ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿತ್ತು. ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ಆದರೆ ದರ್ಶನ್ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಅಧಿಕಾರಿ ವಿರುದ್ಧ, ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಲಾಗಿತ್ತು.

LEAVE A REPLY

Please enter your comment!
Please enter your name here