ಆಭರಣ ಜ್ಯುವೆಲ್ಲರ್ಸ್ ಮಳಿಗೆಗಳಿಗೆ ಐಟಿ ಇಲಾಖೆ ಅಧಿಕಾರಿಗಳ ದಾಳಿ

ಮಂಗಳೂರು: ಪ್ರಸಿದ್ಧ ಚಿನ್ನಾಭರಣ ಮಳಿಗೆ ಆಭರಣ ಜ್ಯುವೆಲ್ಲರ್ಸ್‌ ನ ಮಳಿಗೆಗಳಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಜ್ಯದ ಹಲವೆಡೆ ಇರುವ ಆಭರಣ ಜ್ಯುವೆಲ್ಲರ್ಸ್ ನ ಮಳಿಗೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿದೆ ಎನ್ನಲಾಗಿದ್ದು, ಮಂಗಳೂರು ಶಿವಭಾಗ್‍ನಲ್ಲಿರುವ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಮತ್ತು ಬೆಳ್ತಂಗಡಿಯಲ್ಲಿರುವ ಮಳಿಗೆಗೂ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಳಿಗೆಗಳಲ್ಲಿ ಅಧಿಕಾರಿಗಳಿಂದ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಪತ್ರಗಳನ್ನು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here