ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ – ಪ್ರಮುಖ ಆರೋಪಿಗೆ ಹೈಕೋರ್ಟ್ ಜಾಮೀನು

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ಅಭಿಲಾಷ್‌ ಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ರಂಜಿತ್‌, ಸದಾಶಿವ, ಸುಧೀರ್‌ ಮತ್ತು ಭಾಸ್ಕರ್‌ ಕೆ ಎಂ ಎಂಬವರಿಗೆ ಈಗಾಗಲೇ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು  ಇದೀಗ ಪ್ರಮುಖ ಆರೋಪಿ ಅಭಿಲಾಷ್ ಗೆ ಜಾಮೀನು ಲಭಿಸಿದೆ. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದವನ್ನು ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳ ಪರವಾಗಿ ವಕೀಲರಾದ ಸುಯೋಗ್ ಹೇರಳೆ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here