ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ-ಕೊಲೆ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಕಿರಣ-ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಕಾರ-ಕತ್ತು ಸೀಳಿದ ಮಾಜಿ ಡ್ರೈವರ್

ಮಂಗಳೂರು(ಬೆಂಗಳೂರು): ಬೆಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೇ ಡ್ರೈವರ್ ಕಿರಣ್ ಎಂಬಾತ ಪ್ರತಿಮಾ ಅವರನ್ನು ಕೊಲೆ ಮಾಡಿದ್ದಾನೆ ಎಂಬುದು ಬಹಿರಂಗವಾಗಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ಎನ್ನುವಾತನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಕೆಲಸದಿಂದ ತೆಗೆಯಬೇಡಿ ಎಂದು ಮನೆಗೆ ಬಂದು ಕಾಲು ಹಿಡಿದಿದ್ದ ಕಿರಣ್​, ಬಳಿಕ ಪ್ರತಿಮಾರನ್ನು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಎನ್ನುವ ಅಂಶ ಬಹಿರಂಗವಾಗಿದೆ.

ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡಿದ್ದ ಕಿರಣ್​, ನ.6ರಂದು ಪ್ರತಿಮಾ ಅವರ ಮನೆಗೆ ತೆರಳಿದ್ದ ಕಿರಣ್, ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದಾನೆ. ಅಲ್ಲದೇ ಪ್ರತಿಮಾರ ಕಾಲಿಗೆ ಬಿದ್ದು ಪರಿ ಪರಿಯಾಗಿ ಬೇಡಿಕೊಂಡಿದ್ದಾನೆ. ಆದರೂ ಸಹ ಪ್ರತಿಮಾ ಒಪ್ಪಿರಲಿಲ್ಲ. ಇದರಿಂದ ಮತ್ತಷ್ಟು ಕೋಪ ತಲೆಗೇರಿಸಿಕೊಂಡ ಕಿರಣ್​, ವೈರ್ ಮಾದರಿಯ ವಸ್ತುದಿಂದ ಪ್ರತಿಮಾ ಕುತ್ತಿಗೆಗೆ ಬಿಗಿದಿದ್ದಾನೆ. ಬಳಿಕ ಪ್ರತಿಮಾ ನೆಲಕ್ಕೆ ಬಿದ್ದ ಮೇಲೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ಕೃತ್ಯ ಎಸಗಿದ ನಂತರ ಚಾಮರಾಜನಗರದತ್ತ ಪರಾರಿಯಾಗಿದ್ದಾನೆ. ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಕಿರಣ್​ನ ಫೋನ್ ಸಿಗ್ನಲ್ ಆಧರಿಸಿ ಮಹದೇಶ್ವರಬೆಟ್ಟದಲ್ಲಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಐದು ವರ್ಷಗಳಿಂದ ಕಿರಣ್ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಬೆಂಗಳೂರಿನ ಗಣಿ-ಭೂವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್​ ಹೋಗುವ ಮಾಹಿತಿಯನ್ನು ಲೀಕ್ ಮಾಡುತ್ತಿದ್ದ ಕಾರಣಕ್ಕೆ ಇಲಾಖೆಯ ಕಾರು ಚಾಲಕನಾಗಿದ್ದ ಕಿರಣ್​ ನನ್ನು ಪ್ರತಿಮಾ ಅವರೇ ಕೆಲಸದಿಂದ ತೆಗೆದು ಹಾಕಿದ್ದರು. ಇದೇ ಕಾರಣಕ್ಕೆ ಈ ಮೊದಲು ಪ್ರತಿಮಾ ಅವರು ಕಿರಣ್​ಗೆ ಎಚ್ಚರಿಕೆಯನ್ನೂ ನೀಡಿದ್ದರು. ಅಕ್ಸಿಡೆಂಟ್ ಮಾಡಿದ್ದ ಕಾರಣಕ್ಕೆ ಪ್ರತಿಮಾ ಅವರು ಕಾರು ಚಾಲಕ ಕಿರಣ್​ನನ್ನು 10 ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆದು ಹಾಕಿದ್ದರು. ಈ ಕೋಪದಿಂದಲೇ ಕಿರಣ್​ ಪ್ರತಿಮಾ ಅವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ತನಿಖೆ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ನಡೆಯುತ್ತಿದ್ದು, ಈಗ ಓರ್ವ ಆರೋಪಿ ಕಿರಣ್​ ಎನ್ನುವಾತನ್ನು ವಶಕ್ಕೆ ಪಡೆಯಲಾಗಿದೆ. ಮಹದೇಶ್ವರಬೆಟ್ಟದಲ್ಲಿ ಕಿರಣ್​ನನ್ನು ವಶಕ್ಕೆ ಪಡೆಯಲಾಗಿದೆ.ಈ ಕಿರಣ್ ನಾಲ್ಕು ವರ್ಷದಿಂದ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದ್ರೆ, 10 ದಿನದ ಹಿಂದೆ ಕಿರಣ್​​ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಸದ್ಯಕ್ಕೆ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here