ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಪಿತೃವಿಯೋಗ

ಮಂಗಳೂರು(ಉಡುಪಿ): ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ತಂದೆ ಅಂಗಡಿಮಾರ್ ಕೃಷ್ಣ ಭಟ್ಟರು‌ ಕಳೆದ ರಾತ್ರಿ ನಿಧನರಾಗಿದ್ದಾರೆ.

103 ವರ್ಷದ ಕೃಷ್ಣಭಟ್ಟರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೇ  ಪಕ್ಷಿಕೆರೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ವಿದ್ವಾಂಸರಾಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ತುಳು ಸೌರ ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಕೃಷ್ಣ ಭಟ್ಟರ ಪತ್ನಿ ಯಮುನಾ ದಶಕದ ಹಿಂದೆ ನಿಧನರಾಗಿದ್ದಾರೆ. ಮೃತರು ಐದು ಪುತ್ರರು, ಏಳು ಪುತ್ರಿಯರು ಸೇರಿದಂತೆ ಅಪಾರ ಆಭಿಮಾನಿಗಳನ್ನು ಅಗಲಿದ್ದಾರೆ.

 

 

LEAVE A REPLY

Please enter your comment!
Please enter your name here