ಕಳ್ಳ ಪೊಲೀಸ್-ರೈಲಿನಲ್ಲಿ ರಾತ್ರಿ ಹೊತ್ತು ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆ ಅರೆಸ್ಟ್‌

ಮಂಗಳೂರು(ಬೆಂಗಳೂರು): ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಚಿಕ್ಕಬಳ್ಳಾಪುರದ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ.

ಸಿದ್ದರಾಮರೆಡ್ಡಿ ಎಂಬ ಹೆಸರಿನ ಈ ಪೊಲೀಸ್‌ ಪೇದೆ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಮುಖ್ಯಪೇದೆಯಾಗಿ ಕೆಲಸ ಮಾಡುತ್ತಿದ್ದ. ಈತ ಮಧ್ಯರಾತ್ರಿಯಾದರೆ ಸಾಕು ಸಮೀಪದ ರೈಲ್ವೇ ಸ್ಟೇಶನ್ ಗಳಲ್ಲಿ ಕಳ್ಳತನ ಮಾಡಲು ಮುಂದಾಗುತ್ತಿದ್ದ. ಮಾತ್ರವಲ್ಲ ಸಾಬಣ್ಣ ಎಂಬ ಎಂಓಬಿಯನ್ನ ಕಳ್ಳತನ ಮಾಡಲು ಜೊತೆಯಲ್ಲಿ ಇಟ್ಟುಕೊಂಡಿದ್ದ. ಮಧ್ಯರಾತ್ರಿಯ ವೇಳೆ ಕೇರಳ, ತಮಿಳುನಾಡು ಮೂಲದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡ್ತಾ ಇದ್ದ ಈ ಪೊಲೀಸಪ್ಪ ಅವರಿಂದ ನಗದು ಹಣ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ. ಈ ಕುರಿತು ಸ್ಥಳೀಯ ರೈಲ್ವೇ ಠಾಣೆಗಳಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಪೊಲೀಸ್ ಪೇದೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರೈಲು ನಿಲ್ದಾಣ ಹಾಗೂ ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪೇದೆ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಈ ವಿಚಾರ ಬಯಲಾಗುತ್ತಿದ್ದಂತೆಯೇ ಆರೋಪಿಯನ್ನು ಇಲಾಖೆಯಿಂದ ಅಮಾನತು ಮಾಡಲಾಗಿದೆ. ಕಳ್ಳತನ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here