ಸಿದ್ಧಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ–ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಅಧಿಕಾರ ಸ್ವೀಕಾರ- ಬಿ.ವೈ ವಿಜಯೇಂದ್ರ

ಮಂಗಳೂರು(ತುಮಕೂರು): ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು. 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಸಿದ್ಧಗಂಗಾ ಮಠಕ್ಕೆ ನ.12ರಂದು ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಪಕ್ಷದ ಎಲ್ಲ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸಲಾಗುವುದು. ಪಂಚ ರಾಜ್ಯಗಳ ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಕಾರ್ಯಕ್ರಮಕ್ಕೆ ಬರುವುದಿಲ್ಲ. ನ.16 ಅಥವಾ 17ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ವೀಕ್ಷಕರು ಬರುವ ಸಾಧ್ಯತೆಗಳಿವೆ. ರೈತರಿಗೆ ಬರ ಪರಿಹಾರ ಕೊಡಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ದೊಡ್ಡ ಪಕ್ಷದಲ್ಲಿ ಒಂದು ನಿರ್ಣಯ ಕೈಗೊಂಡಾಗ ಸಣ್ಣಪುಟ್ಟ ವ್ಯತ್ಯಾಸಗಳು ಆಗುತ್ತವೆ. ಪಕ್ಷದ ಕೆಲವು ನಾಯಕರಲ್ಲಿ ಅಸಮಾಧಾನಗಳಿವೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಎಲ್ಲರನ್ನು ಒಗ್ಗೂಡಿಸಿಕೊಂಡು, ಹಿರಿಯರ ಆಶೀರ್ವಾದ, ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲಾಗುವುದು ಎಂದರು.

LEAVE A REPLY

Please enter your comment!
Please enter your name here