ಪ್ರೀತಿ ನಿರಾಕರಣೆ- ಪ್ರಿಯಕರನಿಂದ ಪ್ರೇಯಸಿಯ ಕತ್ತು ಸೀಳಿ ಹತ್ಯೆ

ಮಂಗಳೂರು(ಹಾಸನ): ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.

ಆಲೂರು ತಾಲೂಕಿನ ಕವಳಗೆರೆ ಗ್ರಾಮದ ಸುಚಿತ್ರಾ (20) ಕೊಲೆಯಾದ ಯುವತಿ. ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದ ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಮೊಸಳೆಹೊಸಳ್ಳಿ ಇಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದು, ತೇಜಸ್ ಕೂಡಾ ಅದೇ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ಎನ್ನಲಾಗಿದೆ. ಸುಚಿತ್ರಾ ತೇಜಸ್ ನ ಪ್ರೀತಿಯನ್ನು ನಿರಾಕರಿಸಿದ್ದು, ಈತ ನ.16ರಂದು ಮುಂಜಾನೆ ಸುಚಿತ್ರಾಳನ್ನು ಕುಂತಿಗುಡ್ಡಕ್ಕೆ ಕರೆದೊಯ್ದಿದ್ದಾನೆ. ಬಳಿಕ ಕುತ್ತಿಗೆ ಸೀಳಿ ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

LEAVE A REPLY

Please enter your comment!
Please enter your name here