ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಕಂಬ ಪೊಳಲಿ ದ್ವಾರದಿಂದ ಅಡ್ಡೂರು ಕಡೆಗೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ನ17ರಂದು ಬೆಳಿಗ್ಗೆ ಕಾಜಿಲ ಎಂಬಲ್ಲಿ ಪೊಲೀಸ್‌ ಉಪನಿರೀಕ್ಷಕ ಗುರಪ್ಪ ಶಾಂತಿ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ನಲ್ಲಿ 3 ಜನ ಬರುತ್ತಿರುವುದನ್ನು ಗಮನಿಸಿ ನಿಲ್ಲಿಸಲು ಸೂಚಿಸಿದಾಗ ಪರಾರಿಯಾಗಲು ಯತ್ನಿಸಿದ ಮೂವರನ್ನು ಹಿಡಿದು ವಿಚಾರಿಸಿದಾಗ ಸ್ಕೂಟರಿನ ಡಿಕ್ಕಿಯಲ್ಲಿ ಮಾದಕ ದ್ರವ್ಯ ಗಾಂಜಾ ಪತ್ತೆಯಾಗಿದೆ. ಆರೋಪಿಗಳಿಂದ 6000 ಮೌಲ್ಯದ 340 ಗ್ರಾಂ ತೂಕದ ಗಾಂಜಾವನ್ನು, ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು 22 ವರ್ಷ ಪ್ರಾಯದ ಕೊಳತ್ತಮಜಲು ನಿವಾಸಿ ತೇಜಾಕ್ಷ ಪೂಜಾರಿ, 24 ವರ್ಷದ ಪಲ್ಲಮಜಲು ನಿವಾಸಿ ಸಂತೋಷ್ ಪೂಜಾರಿ, 26 ವರ್ಷದ ತೆಂಕ ಎಡಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂದು ತಿಳಿದು ಬಂದಿದೆ.

 

LEAVE A REPLY

Please enter your comment!
Please enter your name here