ಪ್ರೀತಿಸಿದವನೊಂದಿಗೆ ಷರತ್ತಿನ ವಿವಾಹಕ್ಕೆ ವರನ ಮನೆಯವರ ಒಪ್ಪಿಗೆ-ಮದುವೆಗೆ 2 ದಿನ ಬಾಕಿ ಇರುವಂತೆ ವರನ ಮನೆಯಲ್ಲಿ ವಧು ಆತ್ಮಹತ್ಯೆ-ಆತ್ಮಹತ್ಯೆಯಲ್ಲ ಕೊಲೆ ಎಂದ ವಧು ಪೋಷಕರು

ಮಂಗಳೂರು(ವಿಜಯನಗರ): ಯುವತಿಯೋರ್ವಳು 7-8 ವರ್ಷ ಪ್ರೀತಿ ಮಾಡಿದ ಯುವಕನ ಜೊತೆ ಮದುವೆ ಆಗಲು ಇನ್ನೇನು ಎರಡು ದಿನ ಬಾಕಿ ಇರುವಾಗಲೇ ಆಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ.ಮೃತಪಟ್ಟ ಯುವತಿ ಐಶ್ವರ್ಯ ರೈ ಎಂದು ಗುರುತಿಸಲಾಗಿದೆ.

ಐಶ್ವರ್ಯ ರೈ ಅಂತರ್ಜಾತಿ ಯುವಕನ್ನು ಮದುವೆಯಾಗಲು ಮುಂದಾಗಿದ್ದಳು. ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿಗೆ ನೀಡಿದ್ದರು. ಷರತ್ತುಗಳ ನಡುವೆಯೂ ಇಬ್ಬರು ಮದುವೆಯಾಗಲು ಮುಂದಾಗಿದ್ದರು. ಆದರೆ ಮದುವೆಗೆ ಕೇವಲ 2 ದಿನ  ಮುಂಚಿತವಾಗಿ ಯುವತಿ ವರನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಯುವಕನ ಕುಟುಂಬದ ಮೇಲೆ ಆರೋಪ ಮಾಡಿದ್ದಾರೆ.

 

 

LEAVE A REPLY

Please enter your comment!
Please enter your name here