ಬೆಂದೂರ್ ವೆಲ್ ಹೊಟೇಲ್ ರೂಂನಲ್ಲಿ ಬೆಂಕಿ-ರೂಂ ಒಳಗಿದ್ದ ವ್ಯಕ್ತಿ ಮೃತ್ಯು

ಮಂಗಳೂರು: ಬೆಂದೂರ್ ವೆಲ್ ನ ಹೊಟೇಲ್ ರೂಂನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ.

ಯಶ್ ರಾಜ್ ಕಳೆದ ನ.15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ನಿನ್ನೆ ಊಟವಾದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಒಳಗಿನಿಂದ ಲಾಕ್ ಮಾಡಲಾಗಿದ್ದ ಬಾಗಿಲನ್ನು ತೆರೆದಿದ್ದಾರೆ. ಈ ವೇಳೆ ಯಶ್ ರಾಜ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೂಂನಲ್ಲಿ ಯಶ್ ರಾಜ್ ಒಬ್ಬಂಟಿಯಾಗಿದ್ದರು. ಮೃತ ಯಶ್ ರಾಜ್ ತಾಯಿ ಹಾಗೂ ಪತ್ನಿಯನ್ನು ಹೊಂದಿದ್ದು, ಬಿಕರ್ನಕಟ್ಟೆಯ ನಾರ್ತನ್ ಅಪಾರ್ಟ್ಮೆಂಟ್ ನ ನಿವಾಸಿ ಎನ್ನಲಾಗಿದೆ. ಲಾಡ್ಜ್‌ ನಲ್ಲಿ ಉಳಿದುಕೊಂಡ ಬಗ್ಗೆ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿ ಆಗಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ಲಾಡ್ಜ್‌ನಲ್ಲಿ ಬೆಂಕಿ ಹತ್ತಿಸಿಕೊಂಡು ಯಶ್ ರಾಜ್ ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here