ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಅಭಿನಂದನೆ

ಮಂಗಳೂರು: ಹಿದಾಯ ಫೌಂಡೇಶನ್ ಜುಬೇಲ್ ಘಟಕದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ  ಭಾಗವಹಿಸಲು ಹರೇಕಳ ಹಾಜಬ್ಬ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ಸೌದಿ ಅರೇಬಿಯಾದ ದಮ್ಮಾಂ ಗೆ ಪ್ರಯಾಣಿಸುತ್ತಿದ್ದರು.

ಹರೇಕಳ ಹಾಜಬ್ಬರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿಗಳು ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್, ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದರು. ಶಿಕ್ಷಣ ಚಿಂತಕ, ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಹಾಜಬ್ಬರ ಜೊತೆಗಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here