ಆರ್ಥಿಕ ಮುಗ್ಗಟ್ಟು-ಬದುಕು ಕಗ್ಗಂಟು-ನದಿಗೆ ಹಾರಿ ಆತ್ಮಹತ್ಯೆಗೈದ ವ್ಯಾಪಾರಿ

ಮಂಗಳೂರು(ಕಾಸರಗೋಡು): ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ನ.25ರ ಬೆಳಿಗ್ಗೆ ಪತ್ತೆಯಾಗಿದೆ.

ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತಪಟ್ಟವರು. ನನ್ನ ಜೀವನ ಅಂತ್ಯಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ನ.24ರಂದು ಮುಂಜಾನೆ ಸಂದೇಶ ಕಳುಹಿಸಿದ್ದ ಹಸೈನಾರ್ ಬಳಿಕ ಕಾರಿನಲ್ಲಿ ಬಂದು ಚಂದ್ರಗಿರಿ ಸೇತುವೆಯಲ್ಲಿ ನಿಲ್ಲಿಸಿ ನಂತರ ನದಿಗೆ ಹಾರಿದ್ದರು. ನದಿಗೆ ವ್ಯಕ್ತಿ ಹಾರುತ್ತಿರುವುದನ್ನು ಗಮನಿಸಿದ ಪ್ರತ್ಯಕ್ಷದರ್ಶಿರೋರ್ವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿತ್ತು. ಬಳಿಕ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು , ನಾಗರಿಕರು ಶೋಧ ನಡೆಸಿದ್ದರು. ಘಟನೆ ನಡೆದ ಒಂದು ಕಿ.ಮೀ ದೂರದ ನದಿ ತೀರದಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here