ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಗುರುಪುರ-ಕೈಕಂಬದ ಒಂದೇ ಕುಟುಂಬದ ಐವರ ದುರ್ಮರಣ

ಮಂಗಳೂರು: ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಕುಮಟಾ-ಶಿರಸಿ ಹೆದ್ದಾರಿ ಬಳಿ ನಡೆದಿದೆ. ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ- ಕೈಕಂಬ ಪ್ರದೇಶದ ಕಿನ್ನಿಕಂಬಳದ ಒಂದೇ ಕುಟುಂಬದ ನಾಲ್ವರು ಹಾಗೂ ಚೆನ್ನೈ ಮೂಲದ ಕಾರು ಚಾಲಕ ಮೃತಪಟ್ಟಿದ್ದಾರೆ.

ಮಂಗಳೂರು ತಾಲೂಕಿನ ಗುರುಪುರ ಕೈಕಂಬ ಬಳಿಯ ಕಿನ್ನಿಕಂಬಳ ನಿವಾಸಿ ರಾಮಕೃಷ್ಣರಾವ್ ಬಾಬುರಾವ್ ಅವರ ಪತ್ನಿ ವಿದ್ಯಾಲಕ್ಷ್ಮೀ, ಪುಷ್ಪಾ ಮೋಹನ ರಾವ್, ಸುಹಾಸ್ ಗಣೇಶ್ ರಾವ್, ಹಾಗೂ ಚೆನ್ನೈನ ಅರವಿಂದ ಮೃತಪಟ್ಟಿದ್ದಾರೆ. ಮೃತ ಸುಹಾಸ್ ರಾವ್ ಚೆನೈಯಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು, ಕಾರು ಚಲಾಯಿಸುತ್ತಿದ್ದ ಅರವಿಂದ್ ಚೆನೈಯಲ್ಲಿ ವೈದ್ಯರಾಗಿದ್ದಾರೆ.

ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಶಿರಸಿಯಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಸ್‌ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here