ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ-ಬಿಜೆಪಿ ಜತೆಗಿನ ಮೈತ್ರಿ ಧಿಕ್ಕರಿಸಿ ನಡೆದ ರಾಷ್ಟ್ರೀಯ ಸಭೆ 

ಮಂಗಳೂರು(ಬೆಂಗಳೂರು): ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಕಾಡುಕೊಂಡನಹಳ್ಳಿಯ ಖಾಸಗಿ ಸಭಾಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಭೆಯಲ್ಲಿ ಸಿ.ಕೆ.ನಾಣು ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಇಂದು ನಗರದ ಖಾಸಗಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ದೇವೇಗೌಡರ ಜೆಡಿಎಸ್ ಗೆ ಸೆಡ್ಡು ಹೊಡೆದು ನಾಣು -ಇಬ್ರಾಹಿಂ ಬಣ ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಅವರನ್ನು ಆಯ್ಕೆ ಮಾಡಿದೆ. ಸಭೆಯಲ್ಲಿ ತೆಲಂಗಾಣ ಜೆಡಿಎಸ್ ಅಧ್ಯಕ್ಷ ಸೂರಿ ಒಂದು ಸಾಲಿನ ನಿರ್ಣಯವನ್ನು ಓದಿ ಹೇಳಿದ ಬಳಿಕ ನಿರ್ಣಯ ಅಂಗೀಕಾರವಾಗಿದೆ. ‘ ಪಕ್ಷದ ಇತರರ ಅಭಿಪ್ರಾಯಕ್ಕೆ ಮನ್ನಣೆ ನೀಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ಇತರರಿಗೂ ಇದೆ. ಗಾಂಧೀಜಿಯವರ ತತ್ವ- ಸಿದ್ದಾಂತಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ನಾವು ಖಂಡಿಸುತ್ತೇವೆ’ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

LEAVE A REPLY

Please enter your comment!
Please enter your name here