ಪಕ್ಷದ ಶಾಸಕರ ನಡುವೆ ಸಮನ್ವಯದ ಕೊರತೆ-ಅಶೋಕ್ ಹೆಸರಿನ ನಾಮಫಲಕ ತೆಗೆದರೆ ಮಾತ್ರ ವಿಪಕ್ಷ ನಾಯಕನ ಕೊಠಡಿಗೆ ಹೋಗುವೆ-ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆ

ಮಂಗಳೂರು(ಬೆಳಗಾವಿ): ಬಿಜೆಪಿ ನಾಯಕರ ಮಧ್ಯೆ ಹೊಂದಾಣಿಕೆ ಕೊರತೆ ಹಿನ್ನೆಲೆಯಲ್ಲಿ ಅಧಿವೇಶನ ಕಲಾಪದಲ್ಲಿ ಬಿಜೆಪಿಯ ತೀವ್ರ ಮುಜುಗರಕ್ಕೆ ಸಿಲುಕುತ್ತಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀರ್ಮಾನಗಳನ್ನು ಆ ಪಕ್ಷದ ಸದಸ್ಯರೇ ಪ್ರಶ್ನಿಸುವಂತಾಗಿದೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್, ಅಶೋಕ್ ಹೆಸರಿನ ನಾಮಫಲಕ ಇರುವವರೆಗೂ ನಾನು ಆ ಕೊಠಡಿಗೆ ಕಾಲಿಡುವುದಿಲ್ಲ ಎಂದು ಹೇಳಿಕೊಳ್ಳುವ ಮೂಲಕ ಅಶೋಕ್ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಪಕ್ಷದ ಸದಸ್ಯರ ನಡುವೆ ಸಮನ್ವಯತೆ ಮೂಡಿಸಲು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೊಠಡಿಯಲ್ಲಿ ಸದನ ಆರಂಭಕ್ಕೆ ಮುನ್ನ ಪ್ರತಿನಿತ್ಯ ಶಾಸಕರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಆರ್.ಅಶೋಕ್ ಕೊಠಡಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಗೆ ತೆರಳಲು ಎಸ್.ಆರ್.ವಿಶ್ವನಾಥ್ ನಿರಾಕರಿಸಿದ್ದು, ‘ಬೇಕಾದರೆ ಆರ್.ಅಶೋಕ್ ನಾಮಫಲಕ ತೆಗೆಯಲಿ, ಆಗ ಹೋಗುತ್ತೇನೆ ಎಂದು ಮಾಧ್ಯಮ ಪ್ರತಿನಿಧಿಗಳ ಬಳಿ ಹೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here