ರತನ್ ಟಾಟಾಗೆ ಬೆದರಿಕೆ ಕರೆ-ಸೈರಸ್ ಮಿಸ್ತ್ರಿಗೆ ಆದದ್ದೇ ರತನ್ ಟಾಟಾಗೂ ಆಗುತ್ತೆ ಎಂದು ಹೇಳಿದ ಅಗಂತುಕ- ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಿದ ಮುಂಬೈ ಪೊಲೀಸರು

ಮಂಗಳೂರು(ಮುಂಬೈ): ಭಾರತದ ಹಿರಿಯ ಕೈಗಾರಿಕೋದ್ಯಮಿ ಟಾಟಾ ಸನ್ಸ್’ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಬೆದರಿಕೆ ಕರೆ ಬಂದಿದೆ.

ಆರೋಪಿ ಪೊಲೀಸರಿಗೆ ಕರೆ ಮಾಡಿ ರತನ್ ಟಾಟಾ ಅವರಿಗೆ ಭದ್ರತೆ ಹೆಚ್ಚಿಸದಿದ್ದರೆ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರಂತೆ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದಾನೆ. ಪ್ರಸಿದ್ಧ ಕೈಗಾರಿಕೋದ್ಯಮಿಯೂ ಆಗಿದ್ದ ಮಿಸ್ತ್ರಿ ಅವರು 2022ರಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕರೆ ಸ್ವೀಕರಿಸಿದ ನಂತರ, ಮುಂಬೈ ಪೊಲೀಸರು ಸಂಪೂರ್ಣ ಅಲರ್ಟ್ ಆಗಿದ್ದು, ರತನ್ ಟಾಟಾ ಅವರ ವೈಯಕ್ತಿಕ ಭದ್ರತೆಯನ್ನು ಪೂರೈಸಲು ವಿಶೇಷ ತಂಡವನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ಬೆದರಿಕೆ ಕರೆಯ ಜಾಡು ಕಂಡುಹಿಡಿದಿದ್ದಾರೆ. ಕರ್ನಾಟಕ ಮೂಲದ ಪುಣೆ ನಿವಾಸಿ ಎಂಬಿಎ ಪದವೀಧರ ಬೆದರಿಕೆ ಕರೆ ಮಾಡಿದ ಆರೋಪಿ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಅನಾಮಧೇಯ ಕರೆ ಮಾಡಿದ ವ್ಯಕ್ತಿಗೆ ಸ್ಕಿಜೋಫ್ರೇನಿಯಾ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here