ಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್‌ ಮಾಡಿದ್ದ ಯುವಕನ ವಿರುದ್ಧ ಪ್ರಕರಣ‌ ದಾಖಲು

ಮಂಗಳೂರು(ಚಿಕ್ಕಮಗಳೂರು): ಬಿಎಸ್‌ವೈ ಹೇಳಿದ್ದನ್ನು ಸಿದ್ದರಾಮಯ್ಯ ಹೇಳಿದ್ದಾರೆಂದು ವಾಯ್ಸ್ ರಿಮೇಕ್‌ ಮಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ ಹಣವನ್ನು ಎಲ್ಲಿಂದ ತರಲಿ, ಚುನಾವಣೆಗೋಸ್ಕರ ಹೇಳಿರ್ತಿವಿ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾʼ ಎಂಬ ಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್‌ ಮಾಡಿರುವ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಶರತ್‌ ಗೌಡ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ. ಈ ದೂರಿನನ್ವಯ ನರಸಿಂಹರಾಜಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌‌

LEAVE A REPLY

Please enter your comment!
Please enter your name here