ಬಿಜೆಪಿ ತೊರೆದ ರಾಧಾಕೃಷ್ಣ ಬೊಳ್ಳೂರು ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಬಿಜೆಪಿ ಮಾಜಿ ರೈತ ಮೋರ್ಚ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧಿಕೃತವಾಗಿ ಡಿ.22ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ನಿರ್ದೇಶನದಲ್ಲಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು. ಇದೇ ವೇಳೆ ಬಿಜೆಪಿ ಮಾಜಿ ಗ್ರಾಮ ಸಮಿತಿ ಅಧ್ಯಕ್ಷ ಸತ್ಯ ಪ್ರಸಾದ್ ಪುಳಿಮಾರಡ್ಕ, ಸಹಕಾರಿ ಸಂಘದ ಮಾಜಿ ನಿರ್ದೇಶಕ ಡಿ.ಕೆ.ಸುರೇಶ್ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ವೆಂಕಪ್ಪ ಗೌಡ, ಶಾಹುಲ್ ಹಮೀದ್, ಪ್ರವೀಣ್ ಚಂದ್ರ ಆಳ್ವ, ಪಿ.ಎಸ್ ಗಂಗಾಧರ್ ಗೌಡ, ಸದಾನಂದ ಮಾವಾಜಿ, ಸುರೇಶ್ ಎಂ.ಎಚ್., ಇಟ್ಟಿಗುಂಡಿ ವೆಂಕಠರಮಣ, ಶಶಿಧರ .ಜೆ, ಕೆ.ಎಂ. ಮುಸ್ತಫಾ, ಜಯಪ್ರಕಾಶ್ ನೆಕ್ರಪ್ಪಾಡಿ, ಸತ್ಯಕುಮಾರ್ ಅಡಿಂಜ, ಜಯರಾಮ ಬೊಳ್ಳಾಜೆ, ಭವಾನಿ ಶಂಕರ್ ಕಲ್ಮಡ್ಕ, ರವಿ ಪೂಜಾರಿ, ಚೇತನ್, ಪವನ್ ಮುಂಡ್ರಾಜೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here