ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ- ಕೆಂಡ ಸೇವೆ ವೇಳೆ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಮಂಗಳೂರು(ಉಡುಪಿ): ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕೆಂಡ ಸೇವೆಯಲ್ಲಿ ಅಯ್ಯಪ್ಪ ಮಾಲೆಧಾರಿಯೊಬ್ಬರು ಕೆಂಡ ಹಾಯುವಾಗ ಆಯತಪ್ಪಿ ಬೆಂಕಿಗೆ ಬಿದ್ದ ದುರ್ಘಟನೆ ಮಲ್ಪೆಯಲ್ಲಿ ನಡೆದಿದೆ.

ಈ ಘಟನೆ ಕುರಿತ ವೀಡಿಯೋ ವೈರಲ್‌ ಆಗಿದೆ. ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ಅಯ್ಯಪ್ಪ ಮಾಲಾಧಾರಿಗಳ ಕೆಂಡ ಸೇವೆ ಕಾರ್ಯಕ್ರಮ ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಅದರಂತೆ ಕೆಂಡ ಹಾಯುವವ ವೇಳೆ ಅಯ್ಯಪ್ಪ ಮಾಲಾಧಾರಿ ಆಯತಪ್ಪಿ ಬೆಂಕಿಗೆ ಬಿದ್ದಿದ್ದಾರೆ. ಕೂಡಲೇ ಅಲ್ಲೇ ಇದ್ದ ಅಯ್ಯಪ್ಪ ಮಾಲಾಧಾರಿಗಳು ಸಹಾಯಕ್ಕೆ ಬಂದಿದ್ದು, ವ್ಯಕ್ತಿಯನ್ನು ಎತ್ತಿ ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೈಯಲ್ಲಿ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here